ಗೋಕಾಕ : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಿ.ಬೆಂಗಳೂರು ಇದರ ಗೋಕಾಕ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾವಿ, ತಾಲೂಕು ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಅವರನ್ನು ಆಯ್ಕೆಮಾಡಲಾಯಿತು.
ಸುಮಾರು 25 ವರ್ಷಗಳ ಸುದೀರ್ಘವಾಗಿ ಪತ್ರಿಕಾ ರಂಗದಲ್ಲಿ ಹಾಗೂ ನೂತನ ಡಿಜಿಟಲ್ ಮಾಧ್ಯಮದಲ್ಲಿ ತಮ್ಮದೆ ಆದ ಮಾರ್ಗದರ್ಶನ ಮಾಡಿದ ತಾಲೂಕಿನ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾಂವಿ ಅವರು ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ನಗರದಲ್ಲಿ ಸೋಮವಾರದಂದು ರಾಜ್ಯಾಧ್ಯಕ್ಷ ಅಶೋಕ್ ಭಜಂತ್ರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಶಶಿ ಕನ್ನಪ್ಪನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ.ಮರೆನ್ನವರ ಉಪಸ್ಥಿತರಿದ್ದರು
CKNEWSKANNADA / BRASTACHARDARSHAN CK NEWS KANNADA