Breaking News

ಹೇಳುವವರಿಲ್ಲ ಕೇಳುವವರಿಲ್ಲ ಜನತಾ ಪ್ಲಾಟ್ ಜನರ ಸಮಸ್ಯೆ!


ಗೋಕಾಕ:  ತಾಲೂಕಿನ ಕೊಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಗ್ರಾಮದ ಜನತಾ ಪ್ಲಾಟ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಬೆಳಗಾದರೆ ಅಲ್ಲಿಯ ಜನ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಶಪಿಸುವಂತಾಗಿದೆ .

ಚರಂಡಿಯ ನೀರು ಸರಿಯಾದ ಚರಂಡಿಯ ವ್ಯವಸ್ಥೆ ಇಲ್ಲದೆ ಎಲ್ಲೆಂದರಲ್ಲಿ ಹರಿದು ಕೊಳಕು ವಾಸನೆ ಹಾಗೂ ಮಾರಕ ರೋಗಗಳಿಂದ ಜನರು ತತ್ತರಿಸುತ್ತಿದ್ದಾರೆ. ದಿನ ಬೆಳಗಾದರೆ ಆಸ್ಪತ್ರೆಗೆ ಡೆಂಗ್ಯೂ ಹಾಗೂ ಮಲೆರಿಯಾದಂತ ರೋಗದಿಂದ ಬಳಲುತ್ತಿದ್ದ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.ಸರಿಯಾದ ಕರೆಂಟ್ ವ್ಯವಸ್ಥೆ ಇಲ್ಲದೆ ಸಂಜೆ ಆಗುತ್ತಿದ್ದಂತೆ ವಯಸ್ಸಾದ ಹಿರಿಯರಿಗೆ ಹಾಗೂ ಸಣ್ಣ ಮಕ್ಕಳಿಗೆ ನಡೆದಾಡುವುದು ಶಾಲಾ ಮಕ್ಕಳಿಗೆ ಅಭ್ಯಾಸ ಮಾಡುವುದು ತುಂಬಾ ಕಷ್ಟವಾಗಿದೆ.

ಈ ರೀತಿಯ ಇರುವ ಕಷ್ಟಗಳನ್ನು ನಮ್ಮ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರತಿಕ್ರಿಯೆ ಇಲ್ಲ.ಜನಪ್ರತಿನಿಧಿಗಳಂತು ಇಕಡೆ ಹೊರಳಿಯು ನೋಡಿಲ್ಲ ದಯಮಾಡಿ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇನ್ನಾದರೂ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ…

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ