Breaking News

ಮಳೆ ಮತ್ತು ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿ; ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ!


ಬೆಳಗಾವಿ : ಜಿಲ್ಲೆಯಲ್ಲಿ 2-3 ಕಳೆದ ದಿನಗಳಿಂದ ಸತತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಅಸ್ತವ್ಯಸ್ತಗೊಳಿಸಿದೆ . ಮಳೆ ದೈನಂದಿನ ಜನಜೀವನವನ್ನು ನಿನ್ನೆ ದಿನಾಂಕ 19 ರಂದು 100 ಮಿ.ಮೀ ಅಂದರೆ 10 ಸೆಂ.ಮೀ ಮಳೆಯಾಗಿರುವ ಮಾಹಿತಿಯಿದೆ . ಇನ್ನೂ 3-4 ದಿನಗಳ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವರದಿ ಮಾಡಿದೆ ಜನಜೀವನಕ್ಕೆ ಅಡಚಣೆ ಉಂಟಾಗದಂತೆ ಜಿಲ್ಲಾಡಳಿತ ಆಡಳಿತ ಯಂತ್ರವನ್ನು ಸಮಗ್ರವಾಗಿ ಸನ್ನದ್ಧವಾಗಿರುವ ಅವಶ್ಯಕತೆಯಿದೆ .

 

ಸಂಪೂರ್ಣವಾಗಿ ಸನ್ನದ್ಧ ಸ್ಥಿತಿಯಲ್ಲಿಟ್ಟು ಅವಶ್ಯಕ ಪರಿಹಾರೋಪಾಯಗಳ ಮತ್ತು ತುರ್ತು ಕ್ರಮಗಳ ಕುರಿತು ತ್ವರಿತ ಕಾರ್ಯಪಡೆಯನ್ನು ಸನ್ನದ್ಧಗೊಳಿಸಿ , ನಾಗರೀಕರ ನೆರವಿಗೆ ದಿನದ 24 ಗಂಟೆಯೂ ಅವಶ್ಯಕತೆ ಬಿದ್ದಾಗ ಸ್ಪಂದಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕಿರುವುದು ಅಗತ್ಯವಾಗಿದೆ .

ಈ ಹಿನ್ನೆಲೆಯಲ್ಲಿ ಮಳೆ ಮತ್ತು ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಚುರುಕಾಗಿ ಕಾರ್ಯತತ್ಪರರಾಗಲು ಅವಶ್ಯಕ ಕ್ರಮಗಳನ್ನು ದೈನಂದಿನ ಮೇಲೆ ಕೈಗೊಂಡು ನಾಗರೀಕರಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ