Breaking News

ಪಠ್ಯದ ಜೊತೆಗೆ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನ ಯಶಸ್ವಿ : ಸಂಗಯ್ಯಾ ಬಾಗೋಜಿಮಠ


ವಿಧ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ*.

ಗೋಕಾಕ : ನಗರದ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ವಿಶೇಷವಾದ ವಿಧ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು

ಈ ಕಾರ್ಯಾಗಾರವನ್ನು ದೈಹಿಕ ಶಿಕ್ಷಕರಾದ ಆರ್ ಬಿ ಮಾವಿನಗಿಡದ, ಪ್ರಭಾರಿ ಮುಖ್ಯೋಪಾಧ್ಯಾಯರಾದ ಬಿ ಎಚ್ ಪಾಟೀಲ ಉದ್ಘಾಟಿಸಿದರು.

ಈ ಕಾರ್ಯಾಗಾರವನ್ನು ಕೌಶಲ್ಯ ಬೆಳವಣಿಗೆಯ ತರಬೇತಿದಾರರಾಗಿ ಇದೆ ಶಾಲೆಯ ಹಳೆಯ ವಿದ್ಯಾರ್ಥಿಯಾದ ಸಂಗಯ್ಯಾ ಬಾಗೋಜಿಮಠ ಅವರು ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿಧ್ಯಾರ್ಥಿಗಳಿಗೆ ತಮ್ಮ ಪಠ್ಯ ಪುಸ್ತಕದ ಕಲಿಕೆಯೊಂದಿಗೆ ಇತರ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವು ಯಶಸ್ವಿಯಾಗಲು ಸಹಕಾರಿಯಾಗುತ್ತದೆ.ಹಾಗೂ ಜೀವನದ ಗುರಿ ಸಾಧಿಸಲು ತಯಾರಿ ಮಾಡಿಕೊಳ್ಳುವುದು ಹೇಗೆ, ವೃತ್ತಿ ಆಯ್ಕೆ ಮಾಡಿಕೊಳ್ಳುವುದು ಹೇಗೆ?, ವಿಧ್ಯಾರ್ಥಿಗಳ ಒತ್ತಡ ನಿರ್ವಹಣೆ ಮಾಡುವುದು ಹೇಗೆ?

ಈ ಕಾರ್ಯಾಗಾರದಲ್ಲಿ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಹಾಜರಿದ್ದರು. ಈ ಕಾರ್ಯಾಗಾರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಮೆಚ್ಚುಗೆ ವ್ಯಕ್ತಪಡಿಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ