ಗೋಕಾಕ: ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಮಂಗಳವಾರ ವಿತರಿಸಿದರು.
ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಈ ಹೆಮ್ಮಾರಿ ಸೋಂಕನ್ನು ಕಟ್ಟಿಹಾಕಲು ಸಾಮಾಜಿಕ ಅನಿರ್ವಾಯ ಎಂದರು.

ಶೀವು ಪಾಟೀಲ್, ಆನಂದ ಜಾಧವ, ಅಜ್ಜಪ್ಪಾ ಕರನಿಂಗ, ವೀರಣ್ಣಾ ಹುದ್ದಾರ, ರವಿ ಝಂವರ, ಮಹಾಂತೇಶ ಮೆಳವಂಕಿ ಹಾಗೂ ಅನೇಕ ಪೆಟ್ರೋಲ್ ಪಂಪ್ ಮಾಲೀಕರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA