Breaking News

ವೈ.ಬಿ. ಪಾಟೀಲ್ ಅವರ ಪತ್ನಿ ನಿಧನ!


ಬೆಳಗಾವಿ: ರಾಯಚೂರು ಜಿಲ್ಲೆಯ ಮಂಚಲಾಪೂರ ಗ್ರಾಮದ ವೈ.ಬಿ. ಪಾಟೀಲ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾಟೀಲ್ (70) ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ಇವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಅತ್ತೆಯಾಗಿದ್ದಾರೆ. (ಶ್ರೀಮತಿ ಶಕುಂತಲಾ ಸತೀಶ ಜಾರಕಿಹೊಳಿಯವರ ತಾಯಿ).

ಕೆಲದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ರಾಯಚೂರು ಜಿಲ್ಲೆಯ ಮಂಚಲಾಪೂರ ಗ್ರಾಮಕ್ಕೆ ತರಲಾಗುತ್ತಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಮೃತ ಭಾಗ್ಯಲಕ್ಷ್ಮಿ ವೈ.ಬಿ. ಪಾಟೀಲ್ ಅವರಿಗೆ ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ‌ ಬಂಧುಬಳಗ ಇದ್ದಾರೆ.

ಸತೀಶ ಜಾರಕಿಹೊಳಿ ಸಂತಾಪ:

ಅತ್ತೆಯವರಾದ ಭಾಗ್ಯಲಕ್ಷ್ಮಿ ವೈ.ಬಿ. ಪಾಟೀಲ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಕಂಬನಿ ಮಿಡಿದಿದ್ದು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದಲೂ ಶೋಕ ವ್ಯಕ್ತಪಡಿಸಲಾಗಿದೆ.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಜನರೇ ನನ್ನಾಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ