Breaking News

ಹಿರಿಯರ ಸಹಕಾರದಿಂದ ಅಚ್ಚುಕಟ್ಟು ಅಂಬೇಡ್ಕರ್‌ ಭವನ ನಿರ್ಮಾಣ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ


ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಹಿರಿಯರು ಸಹಕಾರ ನೀಡಿದ್ದರಿಂದ ಇಂದು ಗ್ರಾಮದಲ್ಲಿ ಅಚ್ಚುಕಟ್ಟಾಗಿ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಹೊಸ ವಂಟಮುರಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್‌ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಅಂಬೇಡ್ಕರ್‌ ಭವನ ಬಹಳ ಅವಶ್ಯಕತೆ ಇತ್ತು. ಇಷ್ಟು ದಿನ ಸ್ಥಳ ಸಿಗದೆ ಭವನ ನಿರ್ಮಾಣ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ  ಇಂದು ನಿಮ್ಮ ಬಹು ದಿನಗಳ ಬೇಡಿಕೆ ಈಡೇರಿದೆ ಎಂದು ತಿಳಿಸಿದರು.

ಈ ಭವನ ಎಲ್ಲಾ ಸಮಾಜದ ಕಾರ್ಯಕ್ರಮಗಳು ನಡೆಯಲು ಅನುಕೂಲವಾಗಬೇಕು ಎಂದ ಅವರು, ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ ಇಂದು ರಾಜೀವ ಗಾಂಧಿ ಸೇವೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗೌಸ್ ಪೀರ್ ಮೊಹಮ್ಮದ್, ಆರೀಫ್ ಮುಲ್ಲಾ, ದಾದಾನಸಾಬ್ ಹುಸೇನ್ಸಾಬ್ ಬಸ್ಸಾಪುರಿ, ಆಸಿಫ್ ಬಸ್ಸಾಪುರಿ, ಎಲ್.ಎನ್. ಪಾಟೀಲ್, ಶಿವಪ್ಪ ಹುನ್ನೂರಿ, ಮಾರುತಿ ಮಾಸ್ತಿ, ಹಣಮಂತ ಮುದಗ್ನವರ್, ಸಿದ್ದಪ್ಪ ಹೋಳಿಕರ್, ಮಂಜುಗೌಡ ಪಾಟೀಲ್, ರಫಿದ್ ರಾಮಣ್ಣ ಗುಳ್ಳಗಾರ್, ರಫಿದ್ ರಾಮಣ್ಣ ಗುಳ್ಳಗಾರ್ ಸೇರಿದಂತೆ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಜನರೇ ನನ್ನಾಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ