Breaking News

ಬೆಳಗಾವಿ ನಗರದಲ್ಲಿ ರೈತರ ಶೋಷಣೆ ತಡೆಗೆ ನೂತನ ಮಾರುಕಟ್ಟೆ ಸ್ಥಾಪನೆ : ಸತೀಶ್ ಜಾರಕಿಹೊಳಿ


ಬೆಳಗಾವಿ: ಬೆಳಗಾವಿ ನಗರದಲ್ಲಿ ಖಾಸಗಿ ಮಾರುಕಟ್ಟೆ ಸ್ಥಾಪನೆಯಾಗಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದಿಂದ ಜನ ಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ದೂರಿದರು.
ನಗರದಲ್ಲಿ ಪ್ರಾರಂಭವಾದ ಖಾಸಗಿ ಮಾರುಕಟ್ಟೆ ರೈತರನ್ನು ಶೋಷಣೆ ಮಾಡುತ್ತಿದ್ದು, ಕಾರಣ ಈ ಶೋಷಣೆ ತಪ್ಪಿಸಲು ಪರ್ಯಾಯವಾಗಿ ರೈತರ ಅನುಕೂಲಕ್ಕಾಗಿ ಎಲ್ಲಾ ಸೌಕರ್ಯಗಳೊಂದಿಗೆ ಹೊಸದಾಗಿ 12 ಎಕರೆ ವಿಶಾಲ ಜಾಗದಲ್ಲಿ ಹೊಸ ತರಕಾರಿ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಯಾವುದೇ ಸಂಘಟನೆ ಇರಲಿ ಶಾಲಾ ಹಂತದಲ್ಲಿ ಬರಬಾರದು. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ನೆಪ ಇಟ್ಟುಕೊಂಡು ಕೆಲ ವಿದ್ಯಾರ್ಥಿಗಳು ಕೆಸರಿ ಶಾಲು ಧರಿಸಿ ಶಾಲೆ, ಕಾಲೇಜಿಗೆ ಬರುವುದು ತಪ್ಪು. ಇದನ್ನು ಸರ್ಕಾರ, ಶಿಕ್ಷಣ ಇಲಾಖೆ ಶೀಘ್ರ ಸರಿಪಡಿಸುವ ಕೆಲಸ ಮಾಡಬೇಕೆಂದರು.
ಗೋವಾದಲ್ಲಿ ಕಾಂಗ್ರೆಸ್ ಪರ ಅಲೆ ಇದೆ, ಆದರೆ ಕನ್ನಡಿಗರು ಎಲ್ಲರೂ ಕಾಂಗ್ರೆಸ್ ಪರ ಇಲ್ಲ. ಎಲ್ಲ ಪಕ್ಷದಲ್ಲಿಯೂ ಹಂಚಿ ಹೋಗಿದ್ದಾರೆ. ಈಗಾಗಲೇ ಪ್ರಚಾರ ಆರಂಭಿಸಿದ್ದು,ನಾನು ಕೂಡ ಇಪ್ಪತ್ತು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದೇನೆ ಎಂದ ಅವರು ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಅವರ ಮೇಲೆ ಎಸ್ಐಟಿ ಃ ಅಥವಾ ಂ ರಿಪೋಟ್ ಹಾಕಿದರೂ ಆ ವಿಷಯ ನಮಗೆ ಸಂಬಂಧವಿಲ್ಲ ಎಂದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ