Breaking News

ಹೈಕಮಾಂಡ್ ಸೂಚನೆ; ಗೋವಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ


ಬೆಳಗಾವಿ: ಮಾರ್ಚ್ 10ರಂದು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದ್ದು, ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅಲರ್ಟ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೂ ಗೋವಾಗೆ ಹೋಗಲು ಸೂಚನೆ ನೀಡಿದೆ.

 

ಗೋವಾ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಬರುವವರೆಗೆ ಅಲ್ಲೇ ಇರಬೇಕು. ಫಲಿತಾಂಶ ಅತಂತ್ರವಾಗಿ ಅದರ ಲಾಭ ಪಡೆಯುವ ಅವಕಾಶವಿದ್ದರೆ ಅದನ್ನು ಬಳಸಿಕೊಂಡು ಪಕ್ಷ ಅಧಿಕಾರಕ್ಕೆ ತರಲು ಬೇಕಾದ ಪ್ರಯತ್ನ ಮಾಡಬೇಕು ಎಂದು ಹೈ ಕಮಾಂಡ್ ತಿಳಿಸಿದೆ.

ಇನ್ನೂ ಗೋವಾ ಚುನಾವಣೆಯಲ್ಲಿ ಅನೇಕ ರಣತಂತ್ರ ರೂಪಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಗೋವಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಪ್ರಯತ್ನ ಪಟ್ಟಿದ್ದರು. ಇದರಿಂದ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರಿಗೆ ಆನೆ ಬಲ ಬಂದಂತೆ ಆಗಿತ್ತು.

 

ಇಂದು ಬೆಂಗಳೂರಿನಿಂದ ನೇರ ಗೋವಾಗೆ ತೆರಳಿದ ಸತೀಶ್‌ ಜಾರಕಿಹೊಳಿ ಅವರು 2017ರಲ್ಲಿ ಆದ ಘಟನೆ ಮರುಕಳಿಸದಂತೆ ಎಚ್ಚರ ವಹಿಸುತ್ತಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ