Breaking News

ಜೀವನದ ಬದಲಾವಣೆಗೆ ವಚನಗಳು ಸ್ಪೂರ್ತಿಯಾಗಿ ಕೆಲಸ ಮಾಡುತ್ತವೆ: ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ


ಗೋಕಾಕ: ವಚನ ಸಾಹಿತ್ಯಕ್ಕೆ ಸರಿಸಾಟಿಯಾಗಿರುವ ಸಾಹಿತ್ಯ ಪ್ರಪಂಚದಲ್ಲಿ ಮತ್ತೊಂದು ಇಲ್ಲ. ಎಲ್ಲಿಯೂ ಕೂಡ ಸಿಗುವುದಿಲ್ಲ ಎಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ವಿಶ್ವ ಗುರು ಬಸವೇಶ್ವರರ ಜಯಂತಿ ನಿಮಿತ್ತ  ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಆಡು ಭಾಷೆಯಲ್ಲಿರುವ ವಚನಗಳು ಜನರಿಗೆ ಸರಳವಾಗಿ ಅರ್ಥವಾಗತ್ತವೆ. ಸಮಾಜದಲ್ಲಿ ಬದಲಾವಣೆಗೆ ಮಹತ್ವದ ಪಾತ್ರ ವಹಿಸುವ ‘ವಚನ ಸಾಹಿತ್ಯ ಶ್ರೇಷ್ಠತೆಯ ವಿಚಾರಗಳಿಂದ ಕೂಡಿದೆ’ ಎಂದರು.

ಜೀವನದ ಬದಲಾವಣೆಗೆ ವಚನಗಳು ಸ್ಪೂರ್ತಿಯಾಗಿ ಕೆಲಸ ಮಾಡುತ್ತವೆ. ಬಸವಣ್ಣವರು ವಿಶ್ವಗುರು ಅನಿಸಿಕೊಂಡಿದ್ದಾರೆ. ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ವಚನಗಳ ಮೂಲಕವೇ ಹೋಗಲಾಡಿಸಿದ್ದಾರೆ. ಎಲ್ಲರಿಗೂ ಸಮಾನವಾಗಿ ನೋಡಿಕೊಂಡ, ಅವರು ಸಮಾನತೆಯ ಹರಿಕಾರರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವೀವಕ ಜತ್ತಿ, ಪಾಂಡು ಮನ್ನಿಕೇರಿ, ವಿಠ್ಠಲ ಪರಸನ್ನವರ, ಅರವಿಂದ ಕಾರಚಿ, ಮಾರುತಿ ಗುಟಗುದ್ದಿ, ಪಾಂಡು ರಂಗಸುಭೆ, ಮಂಜೂಳಾ ‌ರಾಮಗಾನಟ್ಟಿ ಸೇರಿದಂತೆ 100ಕ್ಕೂ ಹೆಚ್ಚು ಜನ ಮುಖಂಡರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ