Breaking News

*ಸತೀಶ ಜಾರಕಿಹೊಳಿ ಫೌಂಡೇಶನ್ ದಿಂದ ನಿರಂತರ ಸಮಾಜ ಸೇವೆ : ಯುವ ನಾಯಕ ರಾಹುಲ್‌ ಜಾರಕಿಹೊಳಿ*


*ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕುರ್ಚಿ ಸೌಂಡ್ ಸಿಸ್ಟಮ್ ವಿತರಣೆ.*

ಗೋಕಾಕ: ಮದುವೆ, ಸಭೆ -ಸಮಾರಂಭ ಅನುಕೂಲಕ್ಕಾಗಿ ಸಮುದಾಯಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಮಾಜ ಸೇವೆಗಾಗಿ ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು.

ಇಲ್ಲಿನ ಹಿಲ್‌ ಗಾಡರ್ನ್‌ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಅರಭಾವಿ ಕ್ಷೇತ್ರದ ದೇವಸ್ಥಾನ, ಮಸ್ಜಿದ್ ,ಚರ್ಚ್, ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿ ಅವರು ಮಾತನಾಡಿದರು.

ತಂದೆಯವರಾದ ಸತೀಶ ಜಾರಕಿಹೊಳಿ ಅವರು ಕ್ಷೇತ್ರದ ಅಭಿವೃದ್ಧಿ ಜತೆಗೆ ಸಮುದಾಯಗಳಿಗೆ ಸಾಕಷ್ಟು ಸಹಕಾರ ನೀಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಹೇಳಿದರು.

ಅರಭಾವಿ ಕ್ಷೇತ್ರದ ತಿಮ್ಮಾಪುರ, ಕೊಪ್ಪದಡ್ಡಿ, ಹೊನಕುಪ್ಪಿ, ತಳಕಟನಾಳ, ಕಮಳದಿನ್ನಿ, ಮುನ್ಯಾಳ, ಗಣೇಶವಾಡಿ, ಬಡಿಗವಾಡ, ಅಡಿಬಟ್ಟಿ ಗ್ರಾಮಗಳಿಗೆ ಕುರ್ಚಿ ಸೌಂಡ್ ಸಿಸ್ಟಮ್ ವಿತರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ಕಲ್ಲಪ್ಪಗೌಡ ಲಕ್ಕಾರ, ಸಿದ್ದಾರೂಢ ಮಬನೂರ, ಪರ್ವತಗೌಡ ಪಾಟೀಲ, ಪ್ರಕಾಶ್ ಹೆಗಡೆ, ಲಕ್ಷ್ಮಣ ಮುಸಗುಪ್ಪಿ, ಮಲಕಾಜಿ ಕಬ್ಬೂರ , ಸಂಗಪ್ಪಾ ಸೂರನ್ನವರ , ಶಿವಲಿಂಗ ಪೂಜೇರಿ, ಮಾಳಪ್ಪಾ ಜಾಗನೂರ , ಅಡಿವೆಪ್ಪ ಕಂಕಾಳಿ ಹಾಗೂ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ