Breaking News

ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸೂಚನೆ..!


ಹುಕ್ಕೇರಿ : ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿಂದು ರೈತರು ಮತ್ತು ಸಾರ್ವಜನಿಕರ ಒತ್ತಾಯಗಳನ್ನು ಪರಿಗಣಿಸಿ, 15 ದಿನಗಳ ಕಾಲ ನೀರಿನ ಹರಿವನ್ನು ಇನ್ನೂ 5 ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.

 ಚಿಂಚಲಿ ಮಾಯಕ್ಕಾ ಜಾತ್ರಾ ಮಹೋತ್ಸವಕ್ಕೆ ಸಹ ಅನುಕೂಲ ಕಲ್ಪಿಸುವ ಈ ನಿರ್ಣಯದಿಂದ ಜನರಿಗೆ ಹೆಚ್ಚಿನ ಸಹಾಯವಾಗುವ ನಿರೀಕ್ಷೆಯಿದೆ ಎಂದರು.

ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು 

ಈ ವೇಳೆ ಶಾಸಕರಾದ ಜೆ.ಟಿ.ಪಾಟೀಲ, ದುರ್ಯೋಧನ ಐಹೊಳೆ, ಸಿದ್ಧು ಸವದಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ ಮತ್ತು ಜಾನುವಾರುಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ