Breaking News

PUC ಪರೀಕ್ಷೆ; ಕಾವೇರಿ ಮಲ್ಲಾಪುರೆ ವಿದ್ಯಾರ್ಥಿನಿ ರಾಜ್ಯಕ್ಕೆ 4 ನೇ ಸ್ಥಾನ; ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಂದ ಅಭಿನಂದನೆ.


ಚಿಕ್ಕೋಡಿ: ಪದವಿ ಪೂರ್ವ ಕಲಾ ವಿಭಾಗದ ಪರೀಕ್ಷೆಯಲ್ಲಿ ಕಾವೇರಿ ಪವಾಡಿ ಮಲ್ಲಾಪುರೆ ಎಂಬ ವಿದ್ಯಾರ್ಥಿನಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿದ್ದು ವಿದ್ಯಾರ್ಥಿನಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನಂತರ ಸಾಧನೆ ಮಾಡಿದ ವಿಧ್ಯಾರ್ಥಿನಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮಾತನಾಡಿ ಗುಣಮಟ್ಟಣದ ಶಿಕ್ಷಣವು ದುಬಾರಿ ಎಂಬ ಜನಜನಿತ ನಂಬಿಕೆಯಿರುವ ಸಮಯದಲ್ಲಿ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ತಮ್ಮ ಈ ಸಾಧನೆಯು ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ಸ್ಫೂರ್ತಿ ನೀಡುತ್ತದೆ. ಶಿಸ್ತು, ಶ್ರದ್ಧೆ ಮತ್ತು ಆತ್ಮವಿಶ್ವಾಸದಿಂದ ಯಾವ ಅಡತಡೆಗಳನ್ನಾದರೂ ಭೇದಿಸಿ ಸಮಾಜ ತಿರುಗಿನೋಡುವಂತೆ ಮಾಡಬಹುದು ಎಂಬುದಕ್ಕೆ ತಮ್ಮ ಸಾಧನೆ ನಿದರ್ಶನ ಎಂದು ತಿಳಿಸಿದರು.

ಲಭ್ಯವಿರುವ ಸಂಪನ್ಮೂಲಗಳನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಇತರರಿಗೆ ತಮ್ಮ ಸಾಧನೆ ದಾರಿದೀಪವಾಗಲಿ, ತಾವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ