Breaking News

*ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿ ಹಿಂತುರಿಗಿಸಿದ್ರು ಸಚಿವ ಸತೀಶ್ ಜಾರಕಿಹೊಳಿ*


ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗಿದ್ದ ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನಿರಾಕರಿಸಿದ್ದಾರೆ.

ಈ ಕುರಿತು ಪತ್ರ ಬರೆದು ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ ಎಂದರು.

ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದಂತಹ ಹೊಣೆಗಾರಿಕೆ ನನ್ನ ಮೇಲಿದ್ದು, ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇರುತ್ತದೆ ಎಂದು ತಿಳಿಸಿದ್ದಾರೆ

ಈ ಹಿನ್ನಲೆಯಲ್ಲಿ, ತಾವು ಪ್ರೀತಿಪೂರ್ವಕವಾಗಿ ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ಮುಂದುವರೆದಂತೆ, ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸದೇ, ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದ್ದು, ತಾವು ಈ ನಿರ್ಧಾರವನ್ನು ಸ್ವಾಗತಿಸುತ್ತೀರೆಂದು ಭಾವಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಸರಳತೆ ಮೆರೆದಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ