ಬೆಳಗಾವಿ: ಘಟಪ್ರಭಾ ಕೆನಾಲ್ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯನ್ನು ನೆಲಸಮ ಮಾಡಲಾಗಿದ್ದು, ನೂತನ ಸೇತುವೆಯನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಪರಿನಾಮ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ, ಅಂದಾಜು ರೂ. 5.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯವನ್ನು 45 ದಿನಗಳೊಳಗೆ ಪೂರ್ಣಗೊಳಿಸಬೇಕು. ಇದೇ ವೇಳೆ, ದಿನನಿತ್ಯದ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನೂ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನು ವೇಗವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ವೇಳೆ ವಿವಿಧ ಅಧಿಕಾರಿಗಳು ಹಾಗೂ ಇತರರು ಇದ್ದರು.
CKNEWSKANNADA / BRASTACHARDARSHAN CK NEWS KANNADA