ಬೆಳಗಾವಿ: ತಾಲೂಕಿನ ಹೊನಗಾ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನೂತನ ಆಟೋ ನಿಲ್ದಾಣಕ್ಕೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶುಕ್ರವಾರ ಚಾಲನೆ ನೀಡಿದರು.

ಗ್ರಾಮದ ಜನರು ರಾಹುಲ್ ಜಾರಕಿಹೊಳಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಮಹಿಳೆಯರು ಆರುತಿ ಮಾಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ರಾಹುಲ್ ಅವರನ್ನು ಗ್ರಾಮಸ್ಥರು ಹಾಗೂ ಅವರ ಅಭಿಮಾನಿಗಳು ಸತ್ಕರಿಸಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದು ಸುಣಗಾರ, ಗ್ರಾಪಂ ಅಧ್ಯಕ್ಷ ವಿಜಯ ಹೊನಮನಿ, ಬೈರು ಕಾಂಬ್ಳೆ, ಸುರೇಶ ನಾಯ್ಕ್, ಬಸು ಜಿದ್ದಿ, ಜ್ಯೋತಿಬಾ ಗುಟ್ಟೆನ್ನವರ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಹಾಜರಿದ್ದರು.
CKNEWSKANNADA / BRASTACHARDARSHAN CK NEWS KANNADA